
ಪ್ರಗತಿವಾಹಿನಿ ಸುದ್ದಿ: ಧಾರಾಕಾರವಾಗಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಈ ಘಟನೆ ನಡೆದಿದೆ. ಮನೆಯ ಅಡಿ ಸಿಲುಗಿ ಮಹಿಳೆ ಹೂತು ಹೋಗಿದ್ದಾರೆ. ಸಂಗೀತಾ ಬಾಳಾಸಾಹೇಬ್ ಪಾಟೀಲ್ (30) ಮೃತ ಮಹಿಳೆ.
ರಾತ್ರಿಯಿಡಿ ಸುರುದ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಮಕ್ಕಳು ಮನೆಯಿಂದ ಹೊರಬಂದು ಪಾರಾಗಿದ್ದಾರೆ. ಮಣ್ಣಿನಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಅವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ.
ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.