Karnataka NewsLatestPolitics

*ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿಯ ರಾಜ್ಯಾಧ್ಯಕ್ಷರ ಪತ್ನಿ ನಿಧನ*

ಪ್ರಗತಿವಾಹಿನಿ ಸುದ್ದಿ : ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿಯ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ ಅವರ ಪತ್ನಿ ವತ್ಸಲ ಅವರು ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇತ್ತೀಚೆಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ಹೋಗಿದ್ದ ವೇಳೆ ವತ್ಸಲ ಅವರಿಗೆ ಕೈಗೆ ಗಾಯವಾಗಿತ್ತು. ಈ ಹಿನ್ನಲೆ ತಮ್ಮ ತೋಟದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ನಿನ್ನೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು ಕೂಡಲೇ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು.

Home add -Advt

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಮೃತ ವತ್ಸಲ ಅವರು ಪತಿ ಹೆಚ್.ಎಂ ರೇವಣ್ಣ ಹಾಗೂ ಇಬ್ಬರು ಮಕ್ಕಳಾದ ಶಶಾಂಕ್ ಹಾಗೂ ಅನೂಪ್ ಅವರನ್ನು ಅಗಲಿದ್ದಾರೆ.

Related Articles

Back to top button