HealthKannada NewsKarnataka NewsLatest

*ಆರೋಗ್ಯ ಆವಿಷ್ಕಾರದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲು ಸಾಧ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್* 

ಪ್ರಗತಿವಾಹಿನಿ ಸುದ್ದಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. 

ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಆರೋಗ್ಯ ಕ್ಷೇತ್ರ ಅಭಿವೃದ್ಧಿಗೆ 857 ಕೋಟಿಯಷ್ಟು ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಲು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇಂಥಹ ಐತಿಹಾಸಿಕ ನಿರ್ಣಯ ಬಿಜೆಪಿಯವರ ಕಲ್ಪನೆಯಲ್ಲೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

Home add -Advt

24 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, 10 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೇರಿಸುವುದು, ಹೊಸದಾಗಿ 7 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 4 ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಅಲ್ಲದೇ 30 ಹಾಸಿಗೆಯ 25 ಸಮುದಾಯ ಆರೋಗ್ಯ ಕೇಂದ್ರಗಳನ್ನು 50 ಹಾಸಿಗೆಗೆ ಏರಿಕೆ ಸೇರಿದಂತೆ 6 ಸಮುದಾಯ ಆರೋಗ್ಯ ಕೇಂದ್ರಗಳನ್ನ 100 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುವುದು. 9 ತಾಲೂಕು ಆಸ್ಪತ್ರೆಗಳನ್ನ 150 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುತ್ತದೆ. 2 ತಾಲೂಕು ಆಸ್ಪತ್ರೆಗಳನ್ನು 200 ಬೆಡ್ ಆಸ್ಪತ್ರೆಗಳನ್ನಾಗಿ ನಿರ್ಮಿಸುವುದರ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ರು ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡುವ ಬಿಜೆಪಿಯವರು ಒಮ್ಮೆ ಕಣ್ತೆರದು ನೋಡಲಿ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರದಂತಹ ಕಾರ್ಯಕ್ರಮವನ್ನ ಬಿಜೆಪಿಯವರಿಂದ ನೀಡಲು ಸಾಧ್ಯವೇ.. ಅವರು ಈ ರೀತಿಯ ಯೋಜನೆಗಳನ್ನ ಕಲ್ಪನೆ ಕೂಡ ಮಾಡಲ್ಲ ಟೀಕಿಸಿದರು. ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಇಷ್ಟೊಂದು ಮೊತ್ತದ ಯೋಜನೆ ನೀಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನ ಸಲ್ಲಿಸಿದ ಸಚಿವ ದಿನೇಶ್ ಗುಂಡೂರಾವ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜಯ್ ಸಿಂಗ್ ಅವರು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Related Articles

Back to top button