
ಪ್ರಗತಿವಾಹಿನಿ ಸುದ್ದಿ: ಗುಜರಾತನ್ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ಸಂಸ್ಥೆಯ ವಿಮಾನ ಪತನಾವಾಗಿ 241 ಜನ ಸಾವನ್ನಪ್ಪಿದರು. ಇದರ ಬೆನ್ನಲೆ ಮತ್ತೊಂದು ಹೆಲಿಕ್ಯಾಪ್ಟರ್ ದುರಂತ ಸಂಭವಿಸಿದೆ.
ಚಾರ್ ಧಾಮ್ ಯಾತ್ರಿಕರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಒಂದು ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿ 6 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೌರಿಕುಂಡ್ ಪ್ರದೇಶದಲ್ಲಿ ನಡೆದಿದೆ.
ಭಾನುವಾರ ಮುಂಜಾನೆ ಗೌರಿಕುಂಡ್ ದಿಂದ ಘಾಟಾ ಪ್ರದೇಶಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಐವರು ಯಾತ್ರಿಕರು, ಪೈಲಟ್ ಇದ್ದ ಹೆಲಿಕ್ಯಾಪ್ಟರ್ ನಲ್ಲಿ ಯಾರೂ ಜೀವಂತವಾಗಿ ಉಳಿದಿಲ್ಲ.
ಕೆಟ್ಟ ಹವಾಮಾನವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಧಾವಿಸಿದೆ. ಇನ್ನು ಹೆಚ್ಚಿನ ಮಾಹಿತಿಗಳು ನಿರಿಕ್ಷಿಸಲಾಗಿದೆ.