Belagavi NewsBelgaum NewsKarnataka News
*ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ: ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ತಾತ್ಕಾಲಿಕ ಸೇತುವೆ ನೀರಿನಲ್ಲಿ ಕೊಚ್ಚಿ ಹೋದ ಪರಿಣಾಮ ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಪಕ್ಕದಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಲೈಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಧಾರಾಕಾರ ಮಳೆಯಿಂದಾಗಿ ಈ ರಸ್ತೆ ನೀರಿನಲ್ಲಿ ಕೊಚ್ಚಿ ಹೋಗಿದೆ.
ಮಲಪ್ರಭಾ ನದಿಯ ಒಳ ಹರಿವು ಹೆಚ್ಚಾದ ಪರುಣಾಮ ರಸ್ತೆ ಕೊಚ್ಚಿ ಹೋಗಿದೆ. ಪ್ರಯಾಣಿಕರು ಬೇರೆ ಮಾರ್ಗದ ಮೂಲಕ ಗೋವಾಕ್ಕೆ ತೆರಳಲು ಸೂಚಿಸಲಾಗಿದೆ.