Kannada NewsKarnataka NewsLatest

*ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಶರಣಾದ 19 ವರ್ಷದ ಯುವಕ*

ಪ್ರಗತಿವಾಹಿನಿ ಸುದ್ದಿ: 19 ವರ್ಷದ ಯುವಕನೊಬ್ಬ ಪಾರ್ಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ನಡೆದಿದೆ.

ಹೆಣ್ಣೂರು ಬಳಿಯ ರಿಂಗ್ ರಸ್ತೆಯಲ್ಲಿರುವ ಪಾರ್ಕ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನ್ನೆ. ನೇಪಾಳ ಮೂಲದ ಸುಮಿತ್ ಬಿಕೋ ಅಲಿಯಾಸ್ ತುಷಾರ್ ಆತ್ಮಹತ್ಯೆಗೆ ಶರಣಾದವನು.

Home add -Advt

ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಿನೆ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ. ಇಂದು ಬೆಳಿಗ್ಗೆ ಪಾರ್ಕ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button