Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ 7 ಸೇತುವೆಗಳು ಮುಳುಗಡೆ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ಒಂದು ಲಕ್ಷ ಕ್ಯೂಸೆಕ್ ನೀರು ಒಳಹರಿವು ಹೆಚ್ಚಿದೆ. ಇದರಿಂದಾಗಿ ಬೆಳಗಾವಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ ನದಿಯ ಅಬ್ಬರಕ್ಕೆ ಚಿಕ್ಕೋಡಿ ಭಾಗದ 7 ಕೆಳಹಂತದ ಸೇತುವೆಗಳು ಮತ್ತೆ ಮುಳುಗಡೆಯಾಗಿವೆ. ಕೃಷ್ಣಾ ಹಾಗೂ ಅದರ ಉಪನದಿಗಳ ಅಬ್ಬರದಿಂದಾಗಿ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಪರ್ಕ ಕಡಿತಗೊಂಡಿದೆ.

ಮಲ್ಲಿಕವಾಡ-ದತ್ತವಾಡ ಸೇತುವೆ, ಭೋಜ-ಕಾರದಗಾ ಗ್ರಾಮಗಳ ಸಂಪರ್ಕ ಸೇತುವೆ ಜಲಾವೃತಗೊಂಡಿವೆ. ವೇದಗಂಗಾ ನದಿಯಿಂದಾಗಿ ಭಾರವಾಡ-ಕುನ್ನೂರು, ಭೋಜವಾಡಿ-ಕುನ್ನೂರು, ಅಕ್ಕೋಳ-ಸಿದ್ನಾಳ ಗ್ರಾಮಗಳ ಸಂಪರ್ಕ ಸೇತುವೆ ಮುಳುಗಡೆಯಾಗಿವೆ. ಕೃಷ್ಣಾನದಿಗೆ ಅಡ್ಡಲಾಗಿರುವ ಯಡೂರು-ಕಲ್ಲೋಳ, ಭಾವನಸೌಂಡತ್ತಿ-ಮಾಂಜರಿ ಸಂಪರ್ಕ ಸೇತುವೆ ಜಲಾವೃತಗೊಂಡಿದ್ದು, ಈ ಭಾಗದ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Home add -Advt

Related Articles

Back to top button