Kannada NewsKarnataka NewsLatest

*ಹೃದಯಾಘಾತಕ್ಕೆ ಮತ್ತೋರ್ವ ಬಲಿ: ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ 15 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಮಂಜುನಾಥ್ (51) ಮೃತ ಕಾರು ಚಾಲಕ. ಮಂಜುನಾಥ್ ವೈದ್ಯರೊಬ್ಬರ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹಾಸನ ನಗರದ ಪೆನ್ಶನ್ ಮೊಹಲ್ಲಾ ನಿವಾಸಿ.

ಮನೆಯಲ್ಲಿದ್ದಾಗಲೇ ಮಂಜುನಾಥ್ ಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ವೈದ್ಯರಿಗೆ ಕರೆ ಮಾಡಿ ಆಸ್ಪತ್ರೆಗೆ ಬರುವಷ್ಟರಲ್ಲಿ ಮಂಜುನಾಥ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

Home add -Advt

Related Articles

Back to top button