
ಪ್ರಗತಿವಾಹಿನಿ ಸುದ್ದಿ: ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಒಂದೂವರೆ ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ 1/1A1 ರೀ ಪೋಡಿ 1/4, 1/7. 8.20 ಗುಂಟೆ ಕೋರ್ಟ್ ಸೇಲ್ ಡೀಡ್ ಪ್ರಕಾರ ಖಾತೆ ಮಾಡಿಬೇಕಾಗಿತ್ತು. ಇದನ್ನು ಮಾಡಿಕೊಡಲು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ.ಎಲ್ ಅವರ ಬಳಿ ಸುಮಾರು 2ಲಕ್ಷ ಬೇಡಿಕೆ ಇಟ್ಟಿದ್ದರು.
ಒಂದೂವರೆ ಲಕ್ಷ ಕೊಡುವಂತೆ ಮಾತುಕತೆ ಆಗಿತ್ತು, ಅದರ ಪ್ರಕಾರ ಇಂದು ದೇವನಹಳ್ಳಿ ಬಳಿ ಮಾತುಕತೆ ಪ್ರಕಾರ ಒಂದೂವರೆ ಲಕ್ಷ ನೀಡುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಮತ್ತು ತಂಡ ದಾಳಿ ನಡೆಸಿ ಈ ಅಧಿಕಾರಿಯನ್ನು ಬಂಧಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.