
ಪ್ರಗತಿವಾಹಿನಿ ಸುದ್ದಿ: ಗೋ ರಕ್ಷಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್ ಐ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಪಿಎಸ್ ಐ ನಿಖಿಲ್ ಕಾಂಬಳೆ ಅಮಾನತುಗೊಂಡಿರುವವರು. ಈ ಬಗ್ಗೆ ಬೆಳಗಾವಿ ಎಸ್ ಪಿ ಆದೇಶ ಹೊರಡಿಸಿದ್ದಾರೆ. ಜೂನ್ ೨೬ರಂದು ಗೋವುಗಳನ್ನು ಸಾಗಿಸುತ್ತಿದ್ದ ವಾಹನ ತಡೆದು ಠಾಣೆಗೆ ತಂದಿದ್ದ ಶ್ರೀರಾಮಸೇನೆ ಕಾರ್ಯಕರ್ತರು. ಈ ವೇಳೆ ಪಿಎಸ್ ಐ ನಿಖಿಲ್ ಕಾಂಬಳೆ ಕೇಸ್ ದಾಖಲಿಸದೇ ಬಿಟ್ಟು ಕಳುಹಿಸಿದ್ದರು. ಮೇಲಾಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ.
ಗಡಿಪಾರಾದ ರೌಡಿಶೀಟರ್ ಶ್ರೀರಾಮಸೇನೆ ಕಾರ್ಯಕರ್ತ ಮಹಾಪುರ ಸೊಲ್ಲಪುರೆಯನ್ನು ಕೂಡ ಬಿಟ್ಟು ಕಳುಹಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಪಿಎಸ್ ಐ ಅವರನ್ನು ಅಮಾನತು ಮಾಡಲಾಗಿದೆ.