
ಪ್ರಗತಿವಾಹಿನಿ ಸುದ್ದಿ: ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಹರಿಯಾಣದಲ್ಲಿ ಭೂ ಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.
ದೆಹಲಿ-ಎನ್ ಸಿ ಆರ್ ಸುತ್ತಮುತ್ತಲ ಪ್ರದೇಶದಲ್ಲಿ ಭೂ ಕಂಪವಾಗಿದೆ. ಇಂದು ಬೆಳಿಗ್ಗೆ 9:4ರ ಸುಮಾರಿಗೆ ಭೂಮಿ ಕಂಪಿಸಿದೆ. ನೊಯ್ಡಾ, ಘಾಜಿಯಾಬಾದ್, ಗುರುಗ್ರಾಮ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ಸುಮಾರು 10 ಸೆಕೆಂಡುಗಳಷ್ಟು ಕಾಲ ಭೂಮಿ ಕಂಪಿಸಿದೆ.