
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ಸರ್ಜನ್ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಕ್ರಿಮ್ಸ್)ಯ ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ್ ಕುಡ್ತಲಕರ್ ಲೋಕಾಯುಕ್ತ ಬಲೆಗೆ ಬಿದ್ದವರು.
ಆಸ್ಪತ್ರೆಯ ಹಾಸಿಗೆಗೆ ಬೆಡ್ ಶೀಟ್ ಪೂರೈಸಿದ್ದಕ್ಕೆ ಬಿಲ್ ಮೊತ್ತ 3.5 ಲಕ್ಷ ಹಣ ಪಾವತಿಸಲು 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರ ಮೊಹಸೀನ್ ಖಾನ್ ಅವರಿಂದ ೩೦ ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಡಿವೈ ಎಸ್ ಪಿ ದಿವ್ಯಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ವೈದ್ಯಕೀಯ ಅಧೀಕ್ಷಕನನ್ನು ಬಂಧಿಸಲಾಗಿದೆ.