Kannada NewsKarnataka NewsLatest

*BREAKING: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮುಂದುವರೆದಿದೆ. ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

Home add -Advt

ಕಬೀರ್ (55) ಮೃತ ದುರ್ದೈವಿ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ಕಬೀರ್ ಅವರುಗೆ ಕಾರು ಚಲಾಯಿಸುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪಕ್ಕದಲ್ಲಿ ಕುಳಿತಿದ್ದವರಿಗೆ ಹೇಳಿದ್ದಾರೆ ಅಷ್ಟರಲ್ಲೇ ಕಬೀರ್ ಡ್ರೈವಿಂಗ್ ಸೀಟ್ ನಲ್ಲೇ ಮೂರ್ಛೇ ಹೋಗಿದ್ದಾರೆ. ತಕ್ಷಣ ಪಕ್ಕದಲ್ಲಿದ್ದವರು ಕಾರಿನ ಬ್ರೇಕ್ ಒತ್ತಿ ಕಾರ್ ನಿಲ್ಲಿಸಿದ್ದಾರೆ.

ಕೂಡಲೇ ಕಬೀರ್ ಅವರನ್ನು ಆಯನೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

Related Articles

Back to top button