Kannada NewsKarnataka NewsPolitics

*ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕೇಸ್: ಸಿಐಡಿ ನೀಡಿದ ವರದಿಯೇನು?*

ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಐಡಿ, ಡಿಜಿ & ಐಜಿಪಿಗೆ ವರದಿ ನೀಡಿದೆ.

ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಸಿಐಡಿ ವರದಿ ನೀಡಿದೆ ಎಂದು ತಿಳಿದುಬಂದಿದೆ.

Home add -Advt

ಕಳೆದ ವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ ತನಗೆ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಹೇಳಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ ಪ್ರಕರಣದ ಬಗ್ಗೆ ಸಾಕ್ಷಿಗಳಿಲ್ಲ, ಕೇಸ್ ನಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದೆ.


Related Articles

Back to top button