Kannada NewsKarnataka NewsLatest
*ಭೀಕರ ಬೆಂಕಿ ದುರಂತ: ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ನಗರ್ತಪೇಟೆಯ ಪ್ಲಾಸ್ಟಿಕ್ ಅಂಗಡಿಯ ಕಟ್ಟಡದಲ್ಲಿ ಸಂಭವಿಸಿದ್ದ ಭೀಕರ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ಬೆಂಕಿ ಅನಾಹುತದಲ್ಲಿ ಮದನ್ (38) ಪತ್ನಿ ಸಂಗೀತಾ (33) ಮಿತೇಶ್ (8) ವಿವಾಹ್ (5) ಹಾಗೂ ಮತ್ತೊಂದು ಮಹಡಿಯಲ್ಲಿದ್ದ ಸುರೇಶ್ ಸೇರಿ ಐವರು ಸಜೀವದಹನರಾಗಿದ್ದಾರೆ.
ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತೆರಳಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.




