Kannada NewsKarnataka NewsLatest

*BREAKING: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಸ್ಕ್ ಮ್ಯಾನ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೂರುದಾರ ಮಾಸ್ಕ್ ಮ್ಯಾನ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಮಾಸ್ಕ್ ಮ್ಯಾನ್ ತೋರಿದ 15 ಜಾಗಗಳಲ್ಲಿ ಎಸ್ ಐಟಿ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಶೋಧ ನಡೆಸಿದ ಬಳಿಕ ಮಾಸ್ಕ್ ಮ್ಯಾನ್ ನನ್ನು ಸುದೀರ್ಘ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಆತ ಹೇಳಿದ್ದು ಸುಳ್ಳು ಎಂಬುದು ಬಯಲಾಗಿದೆ. ತಾನು ಸುಳ್ಳು ಹೇಳಿದ್ದಾಗಿ ಆತ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಮ್ಯಾನ್ ನನ್ನು ಎಸ್ ಐಟಿ ಬಂಧಿಸಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಮಾಸ್ಕ್ ಮ್ಯಾನ್ ನನ್ನು ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆ ಇದೆ. ಧರ್ಮಸ್ಥಳ ಪ್ರಕರಣಕ್ಕೆ ಕೊನೆಗೂ ತೆರೆಬೀಳುವ ಸಾಧ್ಯತೆ ದಟ್ಟವಾಗಿದೆ.


Home add -Advt

Related Articles

Back to top button