
ಪ್ರಗತಿವಾಹಿನಿ ಸುದ್ದಿ: ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು.
ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂಡಿಗೆ ನೋಟಿಸ್ ನೀಡಲಾಗಿತ್ತು. ಇದೀಗ ಮೂವರು ವಕೀಲರ ಜೊತೆ ಠಾಣೆಗೆ ಆಗಮಿಸಿರುವ ಸಮೀರ್, ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾರೆ.