
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೆಪ್ಟೆಂಬರ್ 14 ರಂದು ನಡೆಯಲಿರುವ ಈದ್ ಮಿಲಾದ್-ಉನ್-ನಬಿ ಮೆರವಣಿಗೆ ನಡೆಯಲಿರುವ ಕಾರಣ ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶಾಂತಿ ಸಮಿತಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಬೆಳಗಾವಿಯ ಎಲ್ಲಾ ಜಮಾತ್ ಸಮಿತಿಗಳ ಸದಸ್ಯರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭಾಗಿ ಆಗಿದ್ದು, ಕಾರ್ಯಕ್ರಮವನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ತೀರ್ಮಾನಿಸಲಾಯಿತು. ಸಭೆಯ ನೇತೃತ್ವವನ್ನು ಯುವ ನಾಯಕ ಅಮಾನ್ ಸೇಠ್ ವಹಿಸಿದ್ದು, ಸಮುದಾಯ ಮುಖಂಡರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿದರು.