Belagavi NewsBelgaum NewsKannada NewsKarnataka NewsNationalPolitics

*ಗಣೇಶನ ಪ್ರತಿಷ್ಠಾಪಿಸಿ ಭಾವೈಕ್ಯತೆಯ ಸಂದೇಶ ಸಾರಿದ ಡಿಸಿ ಮೊಹಮ್ಮದ್ ರೊಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸಿ ಮೊಹಮ್ಮದ್ ರೊಷನ್ ಅವರು ಹಿಂದೂಗಳ ದೊಡ್ಡ ಹಾಗೂ ಪವಿತ್ರ ಧಾರ್ಮಿಕ ಹಬ್ಬವಾದ ಗಣೇಶ ಹಬ್ಬದಂದು ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಭಾವೈಕ್ಯತೆಯ  ಸಂದೇಶ ಸಾರಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಮ್ಮ ಮನೆಯಲ್ಲಿ ಗಣೇಶ ಮೂರ್ತಿಯನ್ನು ಈ ವರ್ಷವೂ ಪ್ರತಿಷ್ಠಾಪಿಸಿದರು. ಇದಕ್ಕೂ ಮುನ್ನ ಬೆಳಗಾವಿ ಚೆನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ಡಿಸಿ ವಿಶೇಷ ಪೂಜೆ ಸಲ್ಲಿಸಿದರು. 

Home add -Advt

ಬುಧವಾರ ನಗರದೆಲ್ಲೆಡೆ ಭಕ್ತಾದಿಗಳು ಗಣೇಶನನ್ನು ಪ್ರತಿಷ್ಠಾಪನೆ ಮಾಡುವ ಸಡಗರದಲ್ಲಿದ್ದು, ಜಿಲ್ಲಾಧಿಕಾರಿಗಳು ತಮ್ಮ ಪರಿವಾರದೊಂದಿಗೆ ಚೆನ್ನಮ್ಮ ವೃತ್ತದಲ್ಲಿ ಇರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಪರಿಸರಪ್ರೇಮಿ ಗಣೇಶನನ್ನು ಪ್ರತಿಷ್ಠಾಪಿಸಿದರು

ಈ ವೇಳೆ ಜಿಲ್ಲಾಧಿಕಾರಿಗಳ ಕುಟುಂಬದವರೊಂದಿಗೆ, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Back to top button