Kannada NewsKarnataka NewsLatest

*ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ*

ಪ್ರಗತಿವಾಹಿನಿ ಸುದ್ದಿ: ತಾಯಿ-ಮಗ ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.

ಇಲ್ಲಿನ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದ ಕೋಳಿಫಾರಂ ನಲ್ಲಿ ತಾಯಿ-ಮಗ ಇಬ್ಬರೂ ಸೀಮೆ ಎಣ್ಣೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.

ತಾಯಿ ರಶ್ಮಿಪ್ರಿಯಾ (34) ಹಾಗೂ ಮಗ ಪ್ರಭಾತ್ (7) ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt


Related Articles

Back to top button