Kannada NewsKarnataka NewsLatest

*ಭೀಕರ ಸರಣಿ ಅಪಘಾತ: ನಾಲ್ವರು ಬಾಲಕರು ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ, ಕಾರು, ಬೈಕ್ ಗಳ ನಡುವೆ ಸಂಭವಿಸಿದ್ದ ಭೀಕರ ಅಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಇಲ್ಲಿನ ಗಾಳಿಪುರ ಬೈಪಾಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ನಾಲ್ವರು ಅಪ್ರಾಪ್ತರು ಗಂಭೀರವಾಗಿ ಗಾಯಗೊಂಡಿದ್ದರು. ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೂಡ ಕೊನೆಯುಸಿರೆಳೆದಿದ್ದಾರೆ.

Home add -Advt

ಮೆರಾನ್, ರೆಹಾನ್, ಅದಾನ್ ಪಾಷಾ ಹಾಗೂ ಫೈಜಲ್ ಮೃತ ದುರ್ದೈವಿಗಳು. ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button