Kannada NewsKarnataka NewsLatestPolitics
*ಕಲ್ಲು ತೂರಾಟ ಪ್ರಕರಣ: 21 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪ್ರಕರಣ ಸಂಬಂಧ 21 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಮುಂದೆ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆಸಲಾಗಿದೆ. ಕೆಲವರು ಗುಂಪು ಕಟ್ಟಿಕೊಂಡು ಗಲಾಟೆ ಶುರುಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದರು.
ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 21 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂವಾಗಿರಲಿ, ಮುಸ್ಲಿಂರಾಗಿರಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.




