Belagavi NewsBelgaum NewsKannada NewsKarnataka News

*ಹೆಚ್ಚುವರಿ ನ್ಯಾಯಬೆಲೆ ಅಂಗಡಿ ಮಂಜೂರು: ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ಪ್ರಸ್ತುತ ಒಂದು ನ್ಯಾಯಬೆಲೆ ಅಂಗಡಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಅಧಿಸೂಚನೆಯಂತೆ ಇನ್ನೊಂದು ಹೊಸ ನ್ಯಾಯಬೆಲೆ ಅಂಗಡಿ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ: 15-10-2025ರ ಒಳಗಾಗಿ ನಿಗಧಿಪಡಿಸಿದ ದಾಖಲಾತಿಗಳೊಂದಿಗೆ ಬೈಲಹೊಂಗಲ ತಹಶೀಲ್ದಾರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Home add -Advt

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ ಬೈಲಹೊಂಗಲ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಬೆಳಗಾವಿ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇಗಿನಹಾಳ ಗ್ರಾಮದಲ್ಲಿ ಹೆಚ್ಚುವರಿ ನ್ಯಾಯಬೆಲೆ ಅಂಗಡಿ ಮಂಜೂರು: ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಪ್ರಸ್ತುತ ಎರಡು ನ್ಯಾಯಬೆಲೆ ಅಂಗಡಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಅಧಿಸೂಚನೆಯಂತೆ ಇನ್ನೊಂದು ಹೊಸ ನ್ಯಾಯಬೆಲೆ ಅಂಗಡಿ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ: 15-10-2025ರ ಒಳಗಾಗಿ ನಿಗಧಿಪಡಿಸಿದ ದಾಖಲಾತಿಗಳೊಂದಿಗೆ ಬೈಲಹೊಂಗಲ ತಹಶೀಲ್ದಾರ ಕಚೇರಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ ಬೈಲಹೊಂಗಲ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಬೆಳಗಾವಿ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button