Belagavi NewsBelgaum NewsKarnataka NewsLatestPolitics

*ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿ: ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಆಯ್ಕೆಯಾಗಿದ್ದು, ಇಬ್ಬರೂ ಗುರುವಾರ ಅಧಿಕಾರ ಸ್ವೀಕರಿಸಿದರು.

ಇದಕ್ಕೂ ಮುನ್ನ ಈ ಭಾಗದ ಶಕ್ತಿ ದೇವತೆ ಶ್ರೀ ಬಂಡೆಮ್ಮ ದೇವಿಯ ಹಾಗೂ ವಿಘ್ನ ವಿನಾಶಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಜವಾಬ್ದಾರಿ ವಹಿಸಿಕೊಂಡರು.

Home add -Advt

ರೈತರ ಪುನಶ್ಚೇತನ ಪ್ಯಾನಲ್ ನ ಸದಸ್ಯರು, ಸುತ್ತಮುತ್ತಲಿನ ಗ್ರಾಮಗಳ ರೈತರು, ಕಾರ್ಖಾನೆಯ ಕಾರ್ಮಿಕರ ಸಮ್ಮುಖದಲ್ಲಿ ನಡೆದ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ, ಕಾರ್ಖಾನೆಯ ಸರ್ವತೋಮುಖ ಅಭಿವೃದ್ಧಿ ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸಂಕಲ್ಪ ಮಾಡಿದರು.

Related Articles

Back to top button