Kannada NewsKarnataka NewsLatest
*ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ: 10 ಪ್ರಯಾಣಿಕರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಮೊದಲು ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತಕ್ಕೀಡಾಗಿ ನಿಂತಿದ್ದ ಬಸ್ ಗಳಿಗೆ ಮತ್ತೊಂದು ಬಸ್ ಬಂದು ಗುದ್ದಿದೆ.
ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಹತ್ತು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.