Kannada NewsLatestNational
*BREAKING: ಮಹಾರಾಷ್ಟ್ರದಲ್ಲಿ ಕಾರು ಅಪಘಾತ: ರಾಜ್ಯದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದಲ್ಲಿ ಉಮ್ಮರ್ಗದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಾಜ್ಯದ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.
ಬೀದರ್ ಮೂಲದ ನಾಲ್ವರು ಸ್ನೇಹಿತರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಕುಮಾರ್, ರತಿ ಕಾಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದು, ಮೃತರು ಬೀದರ್ ನ ಖಾಶಿಂಪುರ ನಿವಾಸಿಗಳು.
ಹಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಉಮ್ಮರ್ಗ ಬಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.