Belagavi NewsBelgaum NewsKarnataka NewsLatest
*ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ: ಲಕ್ಷ್ಮಣ ಸವದಿ ಬಣಕ್ಕೆ ಭರ್ಜರಿ ಗೆಲುವು*

ರಮೇಶ್ ಜಾರಕಿಹೊಳಿ ಬಣಕ್ಕೆ ಮುಖಭಂಗ
ಪ್ರಗತಿವಾಹಿನಿ ಸುದ್ದಿ: ಅಥಣಿ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಣ ಭರ್ಜರಿ ಜಯಗಳಿಸಿದೆ.
ರಮೇಶ್ ಜಾರಕಿಹೊಳಿ ಬಣಕ್ಕೆ ತೀವ್ರ ಮುಖಭಂಗವಾಗಿದೆ. ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಕುಮಟಳ್ಳಿ ಹಾಗೂ ಲಕ್ಷ್ಮಣ ಸವದಿ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೂ ಲಕ್ಷ್ಮಣ ಸವದಿ ಬಣ ಜಯಭೇರಿ ಬಾರಿಸಿದೆ.
ಸವದಿ ಬೆಂಬಲಿತ 12 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ರಮೇಶ್ ಜಾರಕಿಹೊಳಿ ಬಣ ಸೋಲನುಭವಿಸಿದೆ.




