Kannada NewsKarnataka NewsLatest

*ಆರ್.ಎಸ್.ಎಸ್ ಪಥಸಂಚಲದಲ್ಲಿ ಭಾಗಿಯಾಗಿದ್ದ ಪಿಡಿಓ ಸಸ್ಪೆಂಡ್ ಆದೇಶಕ್ಕೆ KATಯಿಂದ ತಡೆ*

ಬೆಂಗಳೂರು: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ತಡೆಯಾಜ್ಞೆ ನೀಡಿದೆ.

ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ತಡೆ ನೀಡಲಾಗಿದೆ. ರಾಯಚೂರಿನ ಲಿಂಗಸಗೂರಿನಲ್ಲಿ ನಡೆದಿದ್ದ ಆರ್.ಎಸ್.ಎಸ್ ಪಥಸಂಚಲನದಲ್ಲಿ ಪಿಡಿಓ ಪ್ರವೀಣ್ ಕುಮಾರ್ ಭಾಗಿಯಾಗಿದ್ದರು. ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಪ್ರಬೀಣ್ ಕುಮಾರ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮಂಡಳಿ ರಾಜ್ಯ ಸರ್ಕಾರದ ಹೊರಡಿಸಿದ್ದ ಅಮಾನತು ಆದೆಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪಿಡಿಓ ತಮ್ಮ ಕೆಲಸದಲ್ಲಿ ಮುಂದುವರೆಯಲು ಸೂಚಿಸಿದೆ.


Home add -Advt

Related Articles

Back to top button