Kannada NewsKarnataka NewsLatest
		
	
	
*BREAKING: ಆಟವಾಡುತ್ತಿದ್ದ ವೇಳೆ ದುರಂತ: ಕೆರೆಗೆ ಬಿದ್ದು ಇಬ್ಬರು ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯ ಬಳಿ ಆಟವಾಡುತ್ತಿದ್ದ ಬಾಲಕರಿಬ್ಬರೂ ಕೆರೆ ನೀರಿಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಈ ದುರಂತ ನಡೆದಿದೆ. ಬಾಲಕರಿಬ್ಬರೂ ಅಣ್ಣ-ತಮ್ಮಂದಿರು. ಮನೆ ಬಳಿ ಆಟವಾಡುತ್ತಿದ್ದ ಇಬ್ಬರೂ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಗಮನಕ್ಕೆ ಬರುತ್ತಿದ್ದಂತೆ ಪೋಷಕರು, ಸ್ಥಳೀಯರು ಮಕ್ಕಳಿಬ್ಬರನ್ನು ಮೇಲಕೆತ್ತಿದ್ದಾರೆ. ಅಷ್ಟರಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದ. ಇನ್ನೋರ್ವನ ಸ್ಥಿತಿ ಗಂಭೀರವಾಗಿತ್ತು.
ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಆತನೂ ಕೊನೆಯುಸಿರೆಳೆದಿದ್ದಾನೆ. 10 ವರ್ಷದ ಜಗನ್ನಾಥ್ ಹಾಗೂ 8 ವರ್ಷದ ಸಂಜಯ್ ಮೃತ ಬಾಲಕರು. ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
 
					 
				 
					 
					 
					 
					
 
					 
					 
					


