Kannada NewsKarnataka NewsLatestPolitics

*ವಿಧಾನಸೌಧದಲ್ಲಿಯೇ ಟೆರರಿಸ್ಟ್ ಗಳಿದ್ದಾರೆ: ಅವರು ಜೈಲಿನಲ್ಲಿರುವವರಿಗಿಂತಲೂ ಡೇಂಜರ್: ಹೆಚ್.ಡಿ.ಕೆ ಹೊಸ ಬಾಂಬ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ಟೆರರಿಸ್ಟ್ ಗಳಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರು, ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ನಾವು ಜೈಲಿನಲ್ಲಿರುವ ಕೈದಿಗಳ ಬಗ್ಗೆ ಮತನಾಡುತ್ತಿದ್ದೇವೆ. ಗೃಹ ಸಚಿವರು ತನಿಖೆ ಮಾಡುತ್ತೇವೆ ಎನ್ನುತ್ತಾರೆ. ಏನು ತನಿಖೆ ಮಾಡಿ ಏನು ಮಾಡುತ್ತೀರಾ? ವಿಧಾನಸೌಧದಲ್ಲಿಯೇ ಟೆರರಿಸ್ಟ್ ಗಳಿದ್ದಾರೆ ಎಂದರು.

ವಿಧಾನಸೌಧದಲ್ಲಿರುವ ಟೆರರಿಸ್ಟ್ ಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಟೆರರಿಸ್ಟ್ ಗಳಿಗಿಂತಲೂ ಡೇಂಜರ್. ಅಧಿಕಾರಿಗಳ ನಡುವೆ ರಾಜಕಾರಣ ನಡೆಯುತ್ತಿದೆ. ಈ ರೀತಿ ವ್ಯವಸ್ಥೆ ಏನು ಮಾಡಲು ಸಾಧ್ಯ? ಎಂದು ಪ್ರಶ್ನಿಸಿದರು.

Home add -Advt


Related Articles

Back to top button