Kannada NewsKarnataka NewsLatest

*ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಗಿರಿನಗರದಲ್ಲಿ ಈ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಗಗನ್ ಬ್ಯಾಂಕ್ ಉದ್ಯೋಗಿಯಾಗಿದ್ದ. 6 ತಿಂಗಳ ಹಿಂದಷ್ಟೇ ಮೇಘನಾ ಎಂಬುವವರ ಜೊತೆ ವಿವಾಹವಾಗಿದ್ದ.

ಮದುವೆಯಾದಾಗಿನಿಂದ ಪತ್ನಿ ಮೇಘನಾ ಗಗನ್ ಗೆ ಕಿರುಕುಳ ನೀಡುತ್ತಿದ್ದಳಂತೆ. ವಿಪರೀತ ಅನುಮಾನ ಪಡುತ್ತಿದ್ದಳಂತೆ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ನಿನ್ನೆಯೂ ಇಬ್ಬರ ನಡುವೆ ಗಲಾಟೆಯಾಗಿದೆ. ಇದರಿಂದ ನೊಂದ ಗಗನ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button