Kannada NewsKarnataka NewsLatest

*ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನೀರುಪಲಾಅಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಶಿರಗೋಳ ಗ್ರಾಮದಲ್ಲಿ ಕೆಬಿಜೆ ಎನ್ ಎಲ್ ಎಡದಂಡೆ ಕಾಲುವೆಯಲ್ಲಿ ಈ ದುರಂತ ಸಂಭವಿಸಿದೆ. ಬಸಮ್ಮ ಕೊಣ್ಣೂರು (21), ಸಂತೋಷ್ ಕೊಣ್ಣೂರು (16), ರವಿ ಕೊಣ್ಣೂರು (15) ನೀರುಪಾಲಾದವರು.

ಮೂವರೂ ಮುದ್ದೆಬಿಹಾಳ ಪಟ್ಟಣದ ಆಶ್ರಯ ಕಾಲೋನಿ ನಿವಾಸಿಗಳು. ಸ್ಥಳಕ್ಕೆ ಮುದ್ದೆಬಿಹಾಳ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೂವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Home add -Advt


Related Articles

Back to top button