Belagavi NewsBelgaum NewsKannada NewsKarnataka NewsLatest

*BREAKING: ಬೆಳಗಾವಿಯಲ್ಲಿ ಘೋರ ದುರಂತ: ಕಿತ್ತೂರು ಚನ್ನಮ್ಮ ಮೃಗಾಯಲದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಳಗಾವಿಯ ಹೊರವಲಯದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಮೃಗಾಲಯದಲ್ಲಿ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಒಂದೇ ದಿನ 20 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ. ಮೃಗಾಲಯದ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.

Home add -Advt

ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆಗೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಪ್ರಾಥಮಿಕ ವರದಿ ಪ್ರಕಾರ ಬ್ಯಾಕ್ಟಿರಿಯಲ್ ಇನ್ ಫೆಕ್ಷನ್ ನಿಂದ ಕೃಷ್ಣ ಮೃಗಗಳು ಸಾವನ್ನಪ್ಪಿವೆ ಎಂದು ಡಿಎಫ್ ಒ ತಿಳಿಸಿದ್ದಾರೆ.

ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಕೃಷ್ಣಮೃಗಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಕೃಷ್ಣಮೃಗಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.


Related Articles

Back to top button