Kannada NewsLatestNational

*ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಬಾಂಬ್ ದಾಳಿ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಾಯಗೊಂಡಿದ್ದ ಮತ್ತೋರ್ವ ಸಾವನ್ನಪ್ಪಿದ್ದಾರೆ.

ನ.10ರಂದು ಸಂಜೆ ದೆಹಲಿಯ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಐ 20ಕಾರು ಸ್ಫೋಟಗೊಂಡು 13 ಜನರು ಬಲಿಯಾಗಿದ್ದರು. ಕಾರು ಸ್ಫೋಟದಲ್ಲಿ ಉಗ್ರರ ಕೈವಾಡವಿರುದು ದೃಢಪಟ್ಟಿದೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ದೆಹಲಿ ಸ್ಫೋಟದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಗಾಯಾಳುಗಳ ಚಿಕಿತ್ಸೆ ಮುಂದುವರೆದಿದೆ.

Home add -Advt


Related Articles

Back to top button