
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೆ ರಾಷ್ಟ್ರ ರಾಜಧಾನಿಯಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ದೆಹಲಿಯ ನಾಲ್ಕು ಕೋರ್ಟ್ ಗಳು, ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ನಾಲ್ಕು ಕೋರ್ಟ್ ಗಳು, ಸಿಆರ್ ಪಿ ಎಫ್ ನ ಎರಡು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಜೈಶ್ ಉಗ್ರ ಸಂಘಟನೆ ಹೆಸರಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿವೆ.



