Karnataka NewsLatestPolitics

*BREAKING: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರಿ ಚರ್ಚೆ ನಡೆದಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಇಲ್ಲ. ನಮ್ಮ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಅವಕಾಶ ಕೊಟ್ಟಿದೆ. ಸದ್ಯಕ್ಕೆ ಯಾವುದೇ ಬದಲಾವಣೆ ಚರ್ಚೆ ಇಲ್ಲ. ಅಂತಹ ಮಾತುಕತೆಯೂ ಇಲ್ಲ ಎಂದು ಹೇಳಿದರು.

Home add -Advt

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೂ ಆಸೆ ಇರುತ್ತದೆ. ಅವರಿಗೆ ಮಾತ್ರವಲ್ಲ ಹಲವರಿಗೆ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಸದ್ಯಕ್ಕೆ ಯಾವುದೇ ಬದಲಾವಣೆ ಕುರಿತ ಮಾತುಕತೆ ಇಲ್ಲ ಎಂದು ಹೇಳಿದರು.

Related Articles

Back to top button