
ಪ್ರಗತಿವಾಹಿನಿ ಸುದ್ದಿ: ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಲಾಪದ ಆರಂಭದ ದಿನವೇ ವಿಪಕ್ಷಗಳು ಗದ್ದಲ-ಕೋಲಾಹಲ ಆರಂಭಿಸಿರುವ ಘಟನೆ ನಡೆದಿದೆ.
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಲೋಕಸಭೆ ಕಲಾಪದ ಆರಂಭದಲ್ಲಿ ವಿಶ್ವಕಪ್ ಗೆದ್ದಿರುವ ಭಾರತದ ಮಹಿಳಾ ಕ್ರಿಕೆಟ್ ತಂಡ ಹಾಗೂ ಅಂಧರ ಮಹಿಳಾ ಕ್ರಿಕೆಟ್ ಮತ್ತು ಕಬಡ್ಡಿ ತಂಡವನ್ನು ಅಭಿನಂದಿಸಲಾಯಿತು.
ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಎಸ್ ಐ ಆರ್ ಹಾಗೂ ವೋಟ್ ಚೋರಿ ಕುರಿತು ಚರ್ಚೆಗೆ ಆಗ್ರಹಿಸಿ ಗದ್ದಲ ಸೃಷ್ಟಿದವು. ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಓಂ ಬಿರ್ಲಾ, ಲೋಕಸಭಾ ಕಲಾಪವನ್ನು ಮಧ್ಯಾಹ್ನ 12ಗಂಟೆಯವರೆಗೆ ಮುಂದೂಡಿದರು.



