Belagavi NewsBelgaum NewsKannada NewsKarnataka NewsNationalPolitics

*ಪುರಸಭೆ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಪುರಸಭೆಗೆ ಮುತ್ತಿಗೆ ಹಾಕಿ ವರ್ತಕರು, ವ್ಯಾಪಾರಸ್ಥರು, ಅಂಗಡಿಕಾರರು ಪುರಸಭೆ ಮುಖ್ಯಾಧಿಕಾರಿ, ಕಿರಿಯ ಆರೋಗ್ಯ ಸಹಾಯಕ ನಿರೀಕ್ಷಕ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಇಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿನ ಅಂಗಡಿ- ಮುಂಗಟ್ಟುಗಳನ್ನು ಸ್ವಯಂ ಬಂದ್ ಮಾಡಿ, ಮುಖ್ಯಾಧಿಕಾರಿ ವಿರೇಶ ಹಸಬಿ, ಕಿರಿಯ ಆರೋಗ್ಯ ಸಹಾಯಕ ನಿರೀಕ್ಷಕ ಸುರೇಶ ಪಾಟೀಲ್ ವಿರುದ್ಧ ಆಕ್ರೋಶ ಹೊರ ಹಾಕಲಾಗಿದೆ.‌ 

ದಂಡಪದ ರೂಪದಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ಸೂಲಿಗೆ ಮಾಡಲಾಗುತ್ತಿದೆ. ಬೀದಿ ಬದಿಯ ವ್ಯಾಪಾರಸ್ಥರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಪ್ರತಿನಿತ್ಯ ಹಣ ನೀಡುವಂತೆ ಕಿರುಕುಳ ಕೋಡುತ್ತಿದ್ದಾರೆ. ಹಾಗಾಗಿ ಈ ಕೂಡಲೇ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಕಾರಣ ಕೆಲ ಕಾಲ ಸಂಚಾರದಲ್ಲಿ ವ್ಯತಯ ಉಂಟಾಯಿತು.

Home add -Advt

Related Articles

Back to top button