
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಾರ್ವಜನಿಕವಾಗಿ ದುರ್ವರ್ತನೆ ತೋರಿಯುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನವೆಂಬರ್ 28ರಂದು ಸಿನಿಮ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಆರ್ಯನ್ ಖಾನ್, ಬೆಂಗಳೂರುನ ಪ್ರತಿಷ್ಠಿತ ಪಬ್ ಗೆ ತೆರಳಿದ್ದರು. ಈ ವೇಳೆ ಪಬ್ ನ ಬಾಲ್ಕನಿಯಲ್ಲಿ ನಿಂತು ಸಾರ್ವಜಿನಿಕವಾಗಿ ಕೈ ಬೀಸುತ್ತಾ ಮಿಡಲ್ ಫಿಂಗರ್ ತೋರಿಸಿ ದುರ್ವರ್ತನೆ ಮೆರೆದಿದ್ದಾರೆ. ಇದೇ ವೇಳೆ ಆರ್ಯನ್ ಖಾನ್ ಪಕ್ಕದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಕೂಡ ನಿಂತಿದ್ದರು.
ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಆರ್ಯನ್ ಖಾನ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


