Kannada NewsKarnataka NewsLatest
*ಮಾದಕ ವಸ್ತು ಜೈಲಿಗೆ ತರಲು ಬಿಡದಿದ್ದಕ್ಕೆ ಜೈಲು ಸಿಬ್ಬಂದಿಗಳ ಮೇಲೆ ಕೈದಿಗಳಿಂದ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಜೈಲಿನೊಳಗೆ ಮಾದಕ ವಸ್ತುಗಳನ್ನು ತರಲು ಬಿಡದಿದ್ದಕ್ಕೆ ಕೈದಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಕೈದಿಗಳಿಗೆ ಉಪಹಾರ ನೀಡುವ ವೇಳೆ ಕೆಲ ಕೈದಿಗಳು ತಮಗೆ ತಿಂಡಿ ಬೇಡ ತಂಬಾಕು, ಸಿಗರೇಟ್ ಕೊಡುವಂತೆ ಕೇಳಿದ್ದಾರೆ. ಮಾದಕ ವಸ್ತುಗಳಿಗೆ ಜೈಲಿನಲ್ಲಿ ಅವಕಾಶವಿಲ್ಲ. ಕೊಡಲ್ಲ ಎಂದು ಜೈಲಿನ ಸಿಬ್ಬಂದಿಗಳು ಹೇಳಿದ್ದಾರೆ.
ಈ ವೇಳೆ ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್ ಫಯಾನ್, ಕೌಶಿಕ್ ನಿಹಾಲ್ ಎಂಬ ಕೈದಿಗಳು ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆ ವಿಡಿಯೋ ಕೂಡ ವೈರಲ್ ಆಗಿದೆ.


