Kannada NewsKarnataka NewsLatest

*ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿಯೇ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

Home add -Advt

ಕೊಳ್ಳೆಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂತಿಮ ವರ್ಷದ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡವಳು.

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಇನ್ನು ಎರಡು ತಿಂಗಳು ಮುಗಿದಿದ್ದರೆ ನರ್ಸಿಂಗ್ ಕೋರ್ಸ್ ಮುಗಿಯುತ್ತಿತ್ತು. ಅಷ್ಟರಲ್ಲಿ ಯುವತಿ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Related Articles

Back to top button