Belagavi NewsBelgaum NewsKarnataka NewsLatestPoliticsSports
*ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ ಶ್ರೀ ಗಜಾನನ ಸ್ಪೊರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಫ್ ಪಿಚ್ ಪಂದ್ಯಾವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಕ್ರೀಡಾಪಟುಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಪಂದ್ಯಾವಳಿಗಳು ಉತ್ತಮ ವೇದಿಕೆಯಾಗಿದ್ದು, ಆಟಗಳಲ್ಲಿ ಸೋಲು-ಗೆಲುವಿಗಿಂತ ಕ್ರೀಡಾ ಮನೋಭಾವ ಮುಖ್ಯವಾಗಿದೆ. ಬೆಳಗುಂದಿ ಗ್ರಾಮದಲ್ಲಿ ಆಯೋಜನೆಗೊಂಡಿರುವ ಈ ಚಾಂಪಿಯನ್ ಟ್ರೋಫಿ ಸ್ಥಳೀಯ ಯುವಕರಲ್ಲಿ ಒಗ್ಗಟ್ಟು ಮತ್ತು ಕ್ರೀಡಾಸಕ್ತಿಯನ್ನು ಹೆಚ್ಚಿಸಲಿ ಎಂದು ಮನಪೂರ್ವಕವಾಗಿ ಹಾರೈಸುತ್ತೇನೆ ಎಂದರು.
ಈ ವೇಳೆ ಕಾಡಾ ಅಧ್ಯಕ್ಷರಾದ ಯುವರಾಜ್ ಕದಂ, ಮಹೇಶ್ ಪಾಟೀಲ, ಶಿವಾಜಿ ಬೋಕಡೆ, ಪ್ರಕಾಶ ಪಾಟೀಲ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್ ಮುಂತಾದವರು ಉಪಸ್ಥಿತರಿದ್ದರು.



