
ಪ್ರಗತಿವಾಹಿನಿ ಸುದ್ದಿ: ಬೆಂಗಳೂತಿನ ಕೋಗಿಲು ಲೇಔಟ್ ನ ಫಕೀರ್ ಕಾಲೋನಿ ಹಾಗೂ ವಸೀಮ್ ಬಡಾವಣೆಯಲ್ಲಿ ೨೦೦ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಿರುವ ಕುರಿತು ಅದರ ಹಿಂದೆ ಅಡಗಿರುವ ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಲಾಗಿದೆ.
ಸಮಿತಿಯು ಘಟನಾ ಸ್ಥಳತ್ತೆ ತೆರಳಿ ಪರಿಶೀಲನೆ ನಡೆಸಿ ಒಂದು ವಾರದೊಳಗಾಗಿ ವರದಿ ನೀಡಲಿದೆ. ಸಮಿತಿಯಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ದಾಸರಹಳ್ಲಿ ಶಾಸಕ ಮುನಿರಾಜು, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಳವಿಕಾ ಅವಿನಾಶ್, ತಮ್ಮೇಶ್ ಗೌಡ, ಎಸ್.ಹರೀಶ್, ಭಾಸ್ಕರ್ ರಾವ್ ಇರಲಿದ್ದಾರೆ.



