
ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಸಂಭ್ರಮದ ಹೊತ್ತಲ್ಲೇ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ 76 ವೆಂಕಟಾಪುರದಲ್ಲಿ ಈ ಘಟನೆ ನಡೆದಿದೆ. ಸೆಲ್ವಕುಮಾರ್ ಎಂಬಾತ ಪತ್ನಿ ಝಾನ್ಸಿಯನ್ನು ಕೊಲೆಗೈದು ಪರಾರಿಯಾಗಿದ್ದ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ನಾಲ್ಕು ತಾಸಿನಲ್ಲೇ ಪೊಲೀಸರು ಬಂಧಿಸಿದ್ದಾರೆ.
ಪತಿ-ಪತ್ನಿ ನಡುವೆ ಗಲಾಟೆ ನಡೆದು, ಇದೇ ಕಾರಣಕ್ಕೆ ಪತ್ನಿಯನ್ನೇ ಪತಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ. ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



