Film & EntertainmentKarnataka NewsLatest

*ವಿಜಯಲಕ್ಷ್ಮೀ ದರ್ಶನ್ ಗೆ ಅಶ್ಲೀಲ ಕಮೆಂಟ್: ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಇಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಓರ್ವ ಆರೋಪಿ ಬೆಂಗಳೂರು ಮೂಲದವನು ಎಂದು ತಿಳಿದುಬಂದಿದೆ.

ಡೆವಿಲ್ ಸಿನಿಮಾ ಬಿಡುಗಡೆ ಬಳಿಕ ದಾವಣಗೆರೆಗೆ ಭೇಟಿ ನೀಡಿದ್ದ ವಿಜಯಲಕ್ಷ್ಮಿ ದರ್ಶನ್, ಕೆಲ ಹೇಳಿಕೆಗಳನ್ನು ನೀಡಿದ್ದರು. ಈ ಘಟನೆ ಬಳಿಕ ವಿಜಯಲಕ್ಷ್ಮೀ ಅವರಿಗೆ ಕೆಲ ಕೆಟ್ಟ, ಅಶ್ಲೀಲ ಸಂದೇಶಗಳನ್ನು ಕಿಡಿಗೇಡಿಗಳು ರವಾನಿಸಿದ್ದರು.

15 ಇನ್ ಸ್ಟಾಗ್ರಾಂ ಐಡಿ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ವಿಜಯಲಕ್ಷ್ಮೀ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

Home add -Advt

Related Articles

Back to top button