Film & EntertainmentKannada NewsLatestNational

*BREAKING: ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ನಟ ದಳಪತಿ ವಿಜಯ್*

ಪ್ರಗತಿವಾಹಿನಿ ಸುದ್ದಿ: ಕರೂರು ಕಾಲ್ತಿಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.

ವಿಜಯ್ ರಾಜಕೀಯ ರ್ಯಾಲಿ ವೇಳೆ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತ ದಿರಂತದಲ್ಲಿ 41 ಜನರು ಮೃತಪಟ್ಟಿದ್ದರು. ಘಟನೆಯ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ತನಿಖೆ ಚುರುಕುಗೊಳಿಸಿರುವ ಸಿಬಿಐ ನಟ ವಿಜಯ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ನಟ ವಿಜಯ್, ದೆಹಲಿಯಲ್ಲಿ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. 2025ರ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ನಟ ವಿಜಯ್ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯರು, ಮಕ್ಕಳು ಸೇರಿ 41 ಜನರು ಸಾವನ್ನಪ್ಪಿದ್ದಾರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

Home add -Advt


Related Articles

Back to top button