Kannada NewsKarnataka NewsLatest
*ಗಾಳಿಪಟದ ಮಾಂಜಾ ದಾರದಿಂದ ದುರಂತ: ಕುತ್ತಿಗೆಗೆ ಸುತ್ತಿಕೊಂಡ ದಾರ: ಬೈಕ್ ಸವಾರ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 32 ವರ್ಷದ ಸಂಜುಕಾಮ್ರ್ ಹೊಸಮನಿ ಮೃತ ದುರ್ದೈವಿ.
ಬೈಕ್ ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ಮಾಂಜಾ ದಾರ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಲಗಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಬೈಕ್ ಸವಾರ ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರಕ್ಕೆ ಬಲಿಯಾಗಿದ್ದಾರೆ.


