Kannada NewsKarnataka NewsLatestPolitics

*ಅರಿಶಿಣ- ಕುಂಕುಮ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಾಲಗಾರ ಗಲ್ಲಿಯಲ್ಲಿ ಶ್ರೀ ಕಾಳಿಕಾ ದೈವಜ್ಞ ಮಹಿಳಾ ಮಂಡಳ ವತಿಯಿಂದ ಆಯೋಜಿಸಲಾಗಿದ್ದ ಅರಿಶಿನ ಕುಂಕುಮ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸಂಸ್ಕೃತಿಯಲ್ಲಿ ಅರಿಶಿನ – ಕುಂಕುಮಕ್ಕೆ ಬಹಳಷ್ಟು ಮಹತ್ವವಿದೆ. ಅದು ಸೌಭಾಗ್ಯದ ಸಂಕೇತ. ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದೇ ಸಂತಸ ಎಂದರು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಮಂಡಳಿಯ ಎಲ್ಲಾ ಪದಾಧಿಕಾರಿಗಳಿಗೆ ಅವರು ಅಭಿನಂದನೆ ಸಲ್ಲಿಸಿದರು.

Home add -Advt

ಸಮಾರಂಭದಲ್ಲಿ ಕಾಳಿಕಾ ಮಹಿಳಾ ಮಂಡಳದ ಅಧ್ಯಕ್ಷರಾದ ಶುಭಾಂಗಿ ಕಾರೆಕರ್, ಉಪಾಧ್ಯಕ್ಷರಾದ ಶುಭಾ ಕಾರೆಕರ್, ಕಾರ್ಯದರ್ಶಿಗಳಾದ ನೀತಾ ಶಿರೋಡ್ಕರ್ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button