Kannada NewsLatestNational

*ಮಳಿಗೆಯಲ್ಲಿ ಬೆಂಕಿ ಅವಘಡ: ಮಕ್ಕಳು ಸೇರಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮೂರು ಅಂತಸ್ತಿನ ಪೀಠೋಪಕರಣ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ ಅಸ್ಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ.

ತೆಲಂಗಾಣದ ನಾಂಪಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಮಳಿಗೆಯಲ್ಲಿದ್ದ ಪೀಠೋಪಕರಣ, ಕಚ್ಚಾ ವಸ್ತುಗಳು, ಬೆಡ್ ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಗಿವೆ.

ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು, ಓರ್ವ ವೃದ್ಧೆ ಸೇರಿ ಐವರು ಇದ್ದಾರೆ. ಮೃತದೇಹಗಳನ್ನು ಮಳಿಗೆಯ ನೆಲಮಾಳಿಗೆಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಳಿಗೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Home add -Advt

Related Articles

Back to top button