Kannada NewsKarnataka NewsNationalTravel

*ರಾಜ್ಯದಲ್ಲಿ ಮತ್ತೊಂದು ಬಸ್ ದುರಂತ*

ಪ್ರಗತಿವಾಹಿನಿ ಸುದ್ದಿ : ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಖಾಸಗಿ ಸ್ವೀಪರ್ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, 36 ಜನ ಪ್ರಯಾಣಿಕರು ಪಾರಾಗಿದ್ದಾರೆ.‌

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೂಡುರು ಬಳಿ ಈ ಘಟನೆ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವಲ್ಸ್‌ಗೆ ಸೇರಿದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ.

ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Home add -Advt

Related Articles

Back to top button